ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ಎಲ್ಲಾ ಥಿಯೇಟರ್ಗಳಲ್ಲೂ ಏಕರೂಪ ದರ ಜಾರಿ ಸಂಬಂಧ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಟವಾದ 15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.
ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಥಿಯೇಟರ್ಗಳಲ್ಲಿ ಟಿಕೆಟ್ ದರವನ್ನು 200 ರೂ.ಗೆ ಮಿತಿಗೊಳಿಸುವುದಾಗಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು.
ಕರ್ನಾಟಕ ಸಿನೆಮಾಸ್ (ನಿಯಂತ್ರಣ) ನಿಯಮಗಳನ್ನು ತಿದ್ದುಪಡಿ ಮಾಡಲು, ಕಾಯ್ದೆ 1964, 1964 (ಕರ್ನಾಟಕ ಕಾಯ್ದೆ 23) ಅಧಿಕೃತ ಗೆಜೆಟ್ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ನಂತರ ಈ ಕರಡನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಸರ್ಕಾರ ತಿಳಿಸಿದೆ.
ಮೇಲೆ ನಿರ್ದಿಷ್ಟಪಡಿಸಿದ ಅವಧಿ ಮುಗಿಯುವ ಮೊದಲು ಈ ಕರಡಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆ ಮತ್ತು ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತಿಳಿಸಬಹುದು.