
ಸುಪ್ರೀಂಕೋರ್ಟ್ನಲ್ಲಿ ಇಂದು ( ಜುಲೈ 22) ನಟ ದರ್ಶನ್ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ನಟ ದರ್ಶನ್ ಮತ್ತೆ ಜೈಲು ಪಾಲಾಗ್ತಾರಾ ಇಲ್ಲವೇ ಹೈಕೋರ್ಟ್ ಕೊಟ್ಟಿರುವ ಜಾಮೀನು ಮುಂದುವರಿಯುತ್ತಾ ಅನ್ನೋದು ಸುಪ್ರೀಂಕೋರ್ಟ್ ನೀಡುವ ಆದೇಶವನ್ನು ಅವಲಂಬಿಸಿದೆ.
ಸುಪ್ರೀಂಕೋರ್ಟ್, ಹೈಕೋರ್ಟ್ ನೀಡಿರುವ ಜಾಮೀನು ಅನ್ನು ರದ್ದುಪಡಿಸಿದರೇ, ನಟ ದರ್ಶನ್ ಮತ್ತೆ ಜೈಲು ಪಾಲಾಗಬೇಕಾಗುತ್ತೆ.
ಸುಪ್ರೀಂಕೋರ್ಟ್ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ, ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು.
ಜೊತೆಗೆ ಹೈಕೋರ್ಟ್ ಜಾಮೀನು ನೀಡಲು ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ ಎಂದು ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಹೈಕೋರ್ಟ್ ನಟ ದರ್ಶನ್ಗೆ ನೀಡಿರುವ ಜಾಮೀನಿನ ವಿಷಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಹೇಳಿ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು.
ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು.
ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ.
ಈ ಮೂಲಕ ಹೈಕೋರ್ಟ್, ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅತೃಪ್ತಿ, ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರಿ ವಕೀಲ ಅನಿಲ್ ನಿಶಾನಿ ಅವರು, ನಾವು ಸುಪ್ರೀಂ ಕೋರ್ಟ್ಗೆ ಕೊಟ್ಟಿರುವ ದಾಖಲೆಯನ್ನು ಕೋರ್ಟ್ ಪರಿಶೀಲನೆ ಮಾಡಿದೆ. ದರ್ಶನ್ ಅವರ ಇತರೆ ಕ್ರೈಮ್ಗಳ ಬಗ್ಗೆಯೂ ದಾಖಲೆ ನೀಡಿದ್ದೇವೆ.
ಜೊತೆಗೆ ಜೈಲಿನಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ ಕೊಟ್ಟಿದ್ದೇವೆ. ಹೈಕೋರ್ಟ್ ಬೇಲ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.
ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಇಂದು ನಡೆಯುವ ಜಾಮೀನು ಅರ್ಜಿಯ ಮೇಲ್ಮನವಿ ವಿಚಾರಣೆಯು ನಟ ದರ್ಶನ್ ಪಾಲಿಗೆ ಮಹತ್ವದ್ದು. ದರ್ಶನ್, ಸದ್ಯ ಥೈಲ್ಯಾಂಡ್ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ.
ಇದನ್ನೂ ಓದಿ: ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನಕರ್!