
ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ.
ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಮೇಷ ರಾಶಿ
- ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಕೇಳುತ್ತೀರಿ
- ಊಟವೂ ಸಕಾಲಕ್ಕೆ ದೊರೆಯದೇ ಕೋಪ ಹೆಚ್ಚಾಗುವ ಸಾಧ್ಯತೆಯಿರುತ್ತದೆ
- ನಿಮ್ಮಲ್ಲಿರುವ ಬೇರೆಯವರ ವಸ್ತುಗಳು ಕಳೆದುಹೋಗುವ ಸಾಧ್ಯತೆ ಇದೆ
- ಮಕ್ಕಳ ಕೆಟ್ಟ ಅಭ್ಯಾಸಗಳಿಂದ ಅವಮಾನ, ಮನಸ್ಸಿಗೆ ನೋವು ಉಂಟಾಗಬಹುದು
- ಇದರಿಂದ ನಿಮ್ಮ ಹಾಗೂ ನಿಮ್ಮ ಸ್ನೇಹಿತನ ಮಧ್ಯ ಅಸಮಾಧಾನ ಏರ್ಪಟ್ಟು ಕಲಹವಾಗಬಹುದು
ವೃಷಭ
- ಈ ದಿನ ನಿಮಗೆ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ
- ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆ ಇರಲಿ ಶುಭವಿದೆ
- ಆಸ್ತಿಯ ವಿಚಾರವಾಗಿ ವಾದ-ವಿವಾದಗಳು ಏರ್ಪಡಬಹುದು
- ಹಣದ ವಿಚಾರವಾಗಿ ದೈಹಿಕ, ಮಾನಸಿಕ ತೊಂದರೆ ಸಾಧ್ಯತೆ
- ನಿಮ್ಮ ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ವಸ್ತುಗಳು ಕಳುವಾಗುವ ಸಾಧ್ಯತೆ, ಜಾಗ್ರತೆ ವಹಿಸಿ
ಮಿಥುನ
- ನಿಮ್ಮ ಷೇರು ವ್ಯವಹಾರವು ಮಧ್ಯಾಹ್ನ 1.30 ರಿಂದ 3 ಗಂಟೆ ಒಳಗಿರಲಿ
- ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಚ್ಚರಿಕೆ
- ವಿವಾಹ ವಿಚಾರದಲ್ಲಿ ಉದ್ವಿಗ್ನ ಪರಿಸ್ಥಿತಿ ಕಾಡಬಹುದು
- ನಿಮ್ಮ ಕೆಲಸಕ್ಕೆ ಮನೆಯವರ ಸಹಾಯ, ಸಹಕಾರ ದೊರೆಯದೆ ಇರಬಹುದು
ಕಟಕ
- ರಸ್ತೆಯಲ್ಲಿರುವ ಮರ ಅಥವಾ ಮರದ ಕೊಂಬೆಯಿಂದ ತೊಂದರೆ ಸಾಧ್ಯತೆ
- ಅಪಘಾತದಿಂದ ಹೆಚ್ಚು ಹಣ ಖರ್ಚಾಗಬಹುದು, ಜಾಗ್ರತೆ ಇರಲಿ
- ನಿಮ್ಮ ಬುಧ್ಧಿವಂತಿಕೆಯಿಂದ ಎಲ್ಲ ಸಮಸ್ಯೆಗಳನ್ನು ನಿಭಾಯಿಸಿ
ಸಿಂಹ
- ಹಾಲು,ನೀರು ,ಎಣ್ಣೆ ಇತ್ಯಾದಿ ದ್ರವ ಪದಾರ್ಥಗಳನ್ನು ವ್ಯಾಪಾರ ಮಾಡುವವರಿಗೆ ಲಾಭವಿದೆ
- ಈ ದಿನ ವಾಹನ ಅಪಘಾತವಾಗುವ ಸಾಧ್ಯತೆ, ಎಚ್ಚರಿಕೆ ಇರಲಿ
- ಇಂದು ಅನಿರೀಕ್ಷಿತ ಹಣ ನಿಮ್ಮ ಕೈ ಸೇರಬಹುದು
- ನಿಮ್ಮ ಪಾಲುದಾರಿಕೆಯಿಂದ ಹೊರ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು
ಕನ್ಯಾ
- ಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಗೌರವ, ಪುರಸ್ಕಾರ ದೊರೆಯುವ ದಿನ
- ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಗೌರವ, ಸನ್ಮಾನ ಸಿಗುತ್ತದೆ
- ಭೂವ್ಯಾಪಾರಿಗಳಿಗೆ ಉತ್ತಮವಾದ ದಿನ
- ಉತ್ತಮವಾದ ಕಾರ್ಯಗಳು ಆರಂಭವಾಗಬಹುದು
ತುಲಾ
- ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆಹರಿಯದೆ ಒದ್ದಾಡಬೇಕಾಗಬಹುದು
- ಇಂದು ನಿಮ್ಮ ಆತ್ಮವಿಶ್ವಾಸದ ಜೊತೆಗೆ ನಿಮ್ಮ ಪ್ರತಿಭೆಗೆ ತಕ್ಕ ಫಲವು ದೊರಕಬಹುದು
- ನಿಮ್ಮ ಪ್ರತಿಭೆಯನ್ನ ವೈಯಕ್ತಿಕ ಲಾಭಕ್ಕಿಂತ ಸಮಾಜ ಸೇವೆಗೆ ಉಪಯೋಗಿಸಿ
- ರಾಜಕೀಯ ವ್ಯಕ್ತಿಗಳ ಹಾಗೂ ಗಣ್ಯರ ಬೆಂಬಲ ಹೆಚ್ಚಾಗಬಹುದು
ವೃಶ್ಚಿಕ
- ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
- ಈ ರಾಶಿಯ ಸ್ತ್ರೀಯರು ಷೇರು ಮಾರುಕಟ್ಟೆಯಲ್ಲಿ ಹಣವನ್ನು ತೊಡಗಿಸಿ ಲಾಭ ಪಡೆಯುತ್ತಾರೆ
- ಹಳೆಯ ಷೇರುಗಳಿದ್ದರೆ ಇಂದು ಉತ್ತಮ ಬೆಲೆಗೆ ಮಾರಾಟ ಮಾಡಬಹುದು
ಧನಸ್ಸು
- ವ್ಯಾಪಾರ – ವ್ಯವಹಾರಗಳಲ್ಲಿ ತಪ್ಪು ಸಂಭವಿಸಬಹುದು
- ಸ್ನೇಹಿತರು ನಿಮ್ಮನ್ನು ವ್ಯವಹಾರದಿಂದ ಹೊರಗಿಟ್ಟು ರಹಸ್ಯವಾಗಿ ವ್ಯವಹರಿಸುತ್ತಾರೆ
ಮಕರ
- ಮ್ಮ ಕಾರ್ಯಕ್ಷೇತ್ರದಲ್ಲಿರುವ ಚಿಂತನೆ, ಯೋಜನೆಗಳಾಗಲಿ ಯಾರಿಗೂ ಸರಿಯಾಗಿ ಅರ್ಥವಾಗೋದಿಲ್ಲ
- ನಿಮಗೆ ಯಾರ ಸಹಕಾರವೂ ಸರಿಯಾಗಿ ಸಿಗುವುದಿಲ್ಲ
- ನಿಮ್ಮಿಂದ ಹಲವಾರು ಜನ ಉಪಕಾರ ಪಡೆದು ನಿಮ್ಮ ಸ್ವಭಾವಕ್ಕೆ ಬೇಸತ್ತು ದೂರವಾಗುತ್ತಾರೆ
ಕುಂಭ
- ವಾಹದ ದೃಷ್ಟಿಯಿಂದ ನಿಮ್ಮ ಬಂಧುಗಳು ಹೊಸ ಸಂಬಂಧ ಬೆಳೆಸಬಹುದು
- ನಿಮ್ಮ ಮಾತು ಇಂದು ಬಹಳ ಮುಖ್ಯವಾಗಿರುತ್ತದೆ
- ಈ ದಿನ ನಿಮ್ಮ ಹಣದ ಸ್ಥಿತಿ ಸುಧಾರಿಸುತ್ತದೆ
ಮೀನ
- ಚರ್ಮರೋಗಕ್ಕೆ ಸಂಬಂಧಿಸಿದ ವ್ಯಕ್ತಿಗಳು ಜಾಗರೂಕರಾಗಿರಬೇಕು
- ನಿಮ್ಮ ಚರ್ಮರೋಗ ಹೆಚ್ಚಾಗುವ ಸೂಚನೆಗಳಿವೆ
- ವೈದ್ಯರು ಹೇಳಿದ ಪಥ್ಯಗಳನ್ನು ಶಿಸ್ತಿನಿಂದ ಪಾಲಿಸಬೇಕು
- ಸರ್ಕಾರಿ ಉದ್ಯೋಗಿಗಳಿಗೆ ಶುಭದಿನ ಆನಂದವಾಗಿರುತ್ತೀರಿ
- ಚರ್ಮರೋಗಿಗಳು ಅಮೃತಬಳ್ಳಿ ಎಲೆಗಳನ್ನು ಸೇವಿಸಿ
https://bengalorefirst.com/wp-admin